ಅಕ್ರಮ ಗೋಮಾಂಸದ ಹೋಟೆಲ್ ಗಳನ್ನ ತೆರುವುಗೊಳಿಸುವಂತೆ ಹಿಂದು ಜಾಗರಣ ವೇದಿಕೆ ಆಗ್ರಹಿಸಿದೆ

Date:

ಅಕ್ರಮ ಗೋಮಾಂಸದ ಹೋಟೆಲ್ ಗಳನ್ನ ತೆರುವುಗೊಳಿಸುವಂತೆ ಹಿಂದು ಜಾಗರಣ ವೇದಿಕೆ ಆಗ್ರಹಿಸಿದೆ.

ಭದ್ರಾವತಿಯಲ್ಲಿ ನಡೆಯುತ್ತಿರುವ ಅಕ್ರಮ ಗೋ ಕಸಾಯಿ ಖಾನೆಗಳು ಮತ್ತು ಅಕ್ರಮ ಗೋಮಾಂಸದ ಹೋಟೆಲ್ ಗಳನ್ನ ತೆರುವುಗೊಳಿಸುವಂತೆ ಹಿಂದು ಜಾಗರಣ ವೇದಿಕೆ ಆಗ್ರಹಿಸಿದೆ.

ಭದ್ರಾವತಿ : ನಗರದಲ್ಲಿ ನಗರಸಭೆ ವ್ಯಾಪ್ತಿಗೆ ಬರುವ ಅನ್ವರ್ ಕಾಲೋನಿ ಬೋಮ್ಮನಕಟ್ಟೆ ಮುಂತಾದ ಸ್ಥಳಗಳಲ್ಲಿ ಅಕ್ರಮ ಕಸಾಯಿ ಕಾನೆಗಳು ಎಗ್ಗಿಲ್ಲದೆ ರಾಜ ರೋಷವಾಗಿ ನಡೆಯುತ್ತಿದೆ. ಮತ್ತು ಅನ್ವರ್ ಕಾಲೋನಿ, ಸೀಗೆಬಾಗಿ, ಖಾಜಿ ಮೊಹಲ್ಲಾ, ಹೊಳೆ ಹೊನ್ನೂರು ಸರ್ಕಲ್, ಸಾದತ್ ಕಾಲೋನಿ ಬೊಮ್ಮನಕಟ್ಟೆ ಮುಂತಾದ ಭಾಗಗಳಲ್ಲಿ ರಸ್ತೆ ಬದಿಯಲ್ಲಿ ಗೋಮಾಂಸದ ಹೋಟೆಲ್ ಗಳು ಮತ್ತು ಗೋಮಾಂಸದ ಕಬಾಬ್ ಅಂಗಡಿಗಳು ನಡೆಯುತ್ತಿದ್ದು. ನಗರಸಭೆಯ ವ್ಯಾಪ್ತಿಯಲ್ಲಿ ಇರುವುದರಿಂದ ಮುನ್ಸಿಪಾಲ್ ಆಕ್ಟ್ ಪ್ರಕಾರ ಅಕ್ರಮ ಕಸಾಯಿ ಖಾನೆಗಳು ಮತ್ತು ಅಕ್ರಮ ಗೋಮಾಂಸದ ಹೋಟೆಲ್ ಗಳ ವಿರುದ್ಧ ಕಾನೂನು ಕ್ರಮ ಜರುಗಿಸಿ ಕಾನೂನು ಪಾಲನೆ ಮಾಡಬೇಕೆಂದು ಹಿಂದೂ ಜಾಗರಣ ವೇದಿಕೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಮುಂದಿನ ದಿನಗಳಲ್ಲಿ ನಾವು ನಗರಸಭೆಯ ಆಯುಕ್ತರ ವಿರುದ್ಧ ಇಡೀ ಹಿಂದೂ ಸಮಾಜ ಬೀದಿಗಿಳಿಯುವ ಅನಿವಾರ್ಯತೆ ಬರದಂತೆ ತಾವುಗಳು ಒಂದು ವಾರದೊಳಗೆ ಅಕ್ರಮ ಕಸಾಯಿ ಖಾನೆಗಳನ್ನು ತೆರವುಗೊಳಿಸಿ ಅಕ್ರಮ ಗೋಮಾಂಸದ ಹೋಟೆಲ್ ಗಳನ್ನು ತೆರವು ಮಾಡಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟವನ್ನು ಹಿಂದು ಜಾಗರಣ ವೇದಿಕೆ ಮಾಡುತ್ತದೆ ಎಂದು ಮನವಿ ನೀಡುವ ಮೂಲಕ ಆಗ್ರಹಿಸಿದ್ದಾರೆ.

ಜಿಲ್ಲಾ ಸಂಚಾಲಕರಾದ ದೇವರಾಜ್ ಅರಳಿಹಳ್ಳಿ. ಜಿಲ್ಲಾ ಸಮಿತಿ ಪ್ರಮುಖರುಗಳಾದ.
ಉಮೇಶ್ ಗೌಡ, ಮೇಘರಾಜ್, ಸಂತೋಷ್, ಮುರುಡೇಶ್, ಕೃಷ್ಣ, ಪವನ, ಭರತ್ ರಾವ್ ಮತ್ತಿತರ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶಿವಮೊಗ್ಗ ರೈಲು ನಿಲ್ದಾಣದಿಂದ ಹೋಂ ನರ್ಸ್ ಐಶ್ವರ್ಯ ನಾಪತ್ತೆಯಾದ ಯುವತಿ, ಮಾಹಿತಿ ನೀಡಲು ಮನವಿ..

ಶಿವಮೊಗ್ಗ ರೈಲು ನಿಲ್ದಾಣದಿಂದ ಹೋಂ ನರ್ಸ್ ಐಶ್ವರ್ಯ ನಾಪತ್ತೆಯಾದ ಯುವತಿ, ಮಾಹಿತಿ...

ಯಶಸ್ವಿ ಒಂದು ವರ್ಷ ಪೂರೈಸಿದ ಸಂಭ್ರಮ- ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ವಿಶೇಷ ಪೂಜೆ..

ಯಶಸ್ವಿ ಒಂದು ವರ್ಷ ಪೂರೈಸಿದ ಸಂಭ್ರಮ- ಶಿವಮೊಗ್ಗ ಜಿಲ್ಲಾ ಯುವ...

ಲೋಕ ಕಲ್ಯಾಣಕೊಸ್ಕರ ನಡೆದ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ..

ಲೋಕ ಕಲ್ಯಾಣಕೊಸ್ಕರ ನಡೆದ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ.. ಹುಡ್ಕೋ ಕಾಲೋನಿ ಶ್ರೀನಿವಾಸ ದೇವಾಲಯದಲ್ಲಿ...